ಎಸ್.ಆರ್.ಎಸ್ ಹಾಗೂ ಮ್ಯಾಕ್ಸಿ ಕ್ಯಾಬ್ ನಡುವೆ ಭೀಕರ ಅಪಘಾತ; ನಾಲ್ವರ ಸಾವು.

ತುಮಕೂರು ; ತಾಲೂಕಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ಬೆಳಗಿನ ಜಾವ 5.30ರ ಸಮಯದಲ್ಲಿ ತುಮಕೂರು - ಶಿವಮೊಗ್ಗ ಹೆದ್ದಾರಿಯಲ್ಲಿ ಎಸ್.ಆರ್.ಎಸ್ ಬಸ್ ಹಾಗೂ ಮ್ಯಾಕ್ಸಿ ಕ್ಯಾಬ್ ನಡುವೆ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ನಾಲ್ವರು ಸಾವನಪ್ಪಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ತುಮಕೂರಿನ ಮಾರುಕಟ್ಟೆಗೆ ಹೂ ತರುತ್ತಿದ್ದ ರೈತರು ಈ ಅಪಘಾತಕ್ಕೀಡಾಗಿದ್ದಾರೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ದೌಡಾಯಿಸಿ ತನಿಖೆ ಕೈಗೊಳ್ಳುತ್ತಿದ್ದಾರೆ.