ಬೆಂಗಳೂರು: ಸಿಎಂ ಮನೆ ಮುತ್ತಿಗೆಗೆ ಹೊರಟ್ಟಿದ್ದ ಕಾಂಗ್ರೆಸ್ ನಾಯಕರು,ಕಾರ್ಯಕರ್ತರ ಬಂಧನ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರೇಸ್ ಕೋಸ್೯ ರಸ್ತೆ ಕಾಂಗ್ರೆಸ್ ಭವನದಿಂದ ಹೊರಟ ಯಾತ್ರೆಯನ್ನ ಪೊಲೀಸರು ಅರ್ಧದಲ್ಲೇ ತಡೆದಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನೂ ಬಂಧಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಧ್ರುವನಾರಾಯಣ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಗೋವಿಂದರಾಜ್ ಮತ್ತಿತರರು ಕೂಡ ಬಂಧನಕ್ಕೆ ಒಳಗಾದರು.