ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಸಿಎಂ ಖಡಕ್ ಸೂಚನೆ

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಸಿಎಂ ಖಡಕ್ ಸೂಚನೆ

ಪಡಿತರ ಚೀಟಿ ರದ್ದತಿ ವಿಚಾರಕ್ಕೆ ಸಾರ್ವಜನಿಕರಿಂದ ಸಾಕಷ್ಟು ಟೀಕೆ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ. 

ಅಲ್ದೇ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. 

ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ.