ದೆಹಲಿ ಸಿಎಂ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು

ನವದೆಹಲಿ: ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಇಡಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜುಲೈನಲ್ಲಿ ಅವರಿಗೆ ಜಾಮೀನು ನೀಡಿತ್ತು. ಆದರೆ ಸಿಬಿಐ ಅವರನ್ನು ಜೂನ್ನಲ್ಲಿ ಬಂಧಿಸಿದ್ದರಿಂದ ಅವರು ತಿಹಾರ್ ಜೈಲಿನಲ್ಲೇ ಇದ್ದರು. ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದರು.