ಧಾರವಾಡ: ಆಧಾರ್ ಸೇವಾ ಕೇಂದ್ರ ಉದ್ಘಾಟನೆ

ಧಾರವಾಡ: ಆಧಾರ್ ಸೇವಾ ಕೇಂದ್ರ ಉದ್ಘಾಟನೆ

ಧಾರವಾಡ: ಧಾರವಾಡದ ಕೆ.ಸಿ.ಪಾರ್ಕ್ ಎದುರಿನ ಮಂಡಿ ಪ್ಲಾಜಾದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಆಧಾರ್ ಸೇವಾ ಕೇಂದ್ರವನ್ನು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಉದ್ಘಾಟಿಸಿದರು. ಆಧಾರ್ ನೋಂದಣಿ ಹಾಗೂ ಮಾಹಿತಿಯನ್ನು ಅಪ್‌ಡೇಟ್ ಮಾಡಲು ಈ ಕೇಂದ್ರ ಸಹಕಾರಿಯಾಗಲಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು. ಆಧಾರ್ ನೋಂದಣಿ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿದರು. ಆಧಾರ್ ಸೇವಾ ಕೇಂದ್ರದ ಮ್ಯಾನೇಜರ್ ಸ್ವಾತಿ ಕೊಟಬಾಗಿ, ಅರ್ಜುನ ವಡ್ಡರ ಮತ್ತಿತರರು ಉಪಸ್ಥಿತರಿದ್ದರು.