ಧಾರವಾಡ: ಜುಲೈ 24ರಿಂದ ಆಗಷ್ಟ್ 2ರವರೆಗೆ ಧಾರವಾಡ ಜಿಲ್ಲೆಯಲ್ಲಿ ಇ-ಪೌತಿ ಆಂದೋಲನ

ಧಾರವಾಡ: ಜುಲೈ 24ರಿಂದ ಆಗಷ್ಟ್ 2ರವರೆಗೆ ಧಾರವಾಡ ಜಿಲ್ಲೆಯಲ್ಲಿ ಇ-ಪೌತಿ ಆಂದೋಲನ

ಧಾರವಾಡ: ಪಹಣಿಗಳಿಗೆ ಆಧಾರ ಜೋಡಣೆ ಸಂದರ್ಭದಲ್ಲಿ ಜಿಲ್ಲೆಯ ಸಾವಿರಾರು ಖಾತೆಗಳಲ್ಲಿ ವಾರಸುದಾರರ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಉಚಿತವಾಗಿ ಖಾತೆ ಮಾಡುವ ಉದ್ದೇಶದಿಂದ ಇ-ಪೌತಿ ಅಂದೋಲನವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ. 

ಜುಲೈ 24ರಿಂದ ಆಗಸ್ಟ್ 2 ರವರೆಗೆ 10 ದಿನಗಳ ವಿಶೇಷ ಇ-ಪೌತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಕಂದಾಯ ಸಚಿವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇ-ಪೌತಿ ತಂತ್ರಾಂಶವನ್ನು ವಿಸ್ತರಿಸಲು ನಿರ್ದೇಶನ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಪಹಣಿ ಪತ್ರಿಕೆಗಳಿಗೆ ಆಧಾರ ಜೋಡಣೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಈ ಕಾರ್ಯದಲ್ಲಿ ಈವರೆಗೂ ಶೇಕಡಾ 87.33 ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

ಪಹಣಿ ಪತ್ರಿಕೆಗಳಿಗೆ ಆಧಾರ ಜೋಡಣೆ ಮಾಡುವ ಅವಧಿಯಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ಇ-ಪೌತಿ ತಂತ್ರಾಂಶದ ಮೂಲಕ ವಾರಸುದಾರರಿಗೆ ಖಾತೆ ಬದಲಾವಣೆ ಮಾಡಲು ಸಂಬಂಧಿಸಿದ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಗಳಲ್ಲಿ ಜುಲೈ 24 ರಿಂದ ಆಗಸ್ಟ್ 2ರವರೆಗೆ 10 ದಿನಗಳ ವಿಶೇಷ ಇ-ಪೌತಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ. 

ವಿಶೇಷ ಇ-ಪೌತಿ ಆಂದೋಲನದ ಸಂದರ್ಭದಲ್ಲಿ ಪೌತಿ ಅಂತಾ ಗುರುತಿಸಲಾದ ಪಹಣಿ ಪತ್ರಿಕೆಗಳ ಇ-ಪೌತಿ ಕಾರ್ಯಕ್ಕೆ ಅವಶ್ಯಕ ದಾಖಲೆಗಳೊಂದಿಗೆ ಸಾರ್ವಜನಿಕರು ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿ, ಉಚಿತವಾಗಿ ಖಾತೆ ಬದಲಾವಣೆ ಮಾಡಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. 

ಇ-ಪೌತಿ ಖಾತೆ ಅಂದೋಲನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಥವಾ ಅಗತ್ಯ ದಾಖಲಾತಿಗಳ ಮಾಹಿತಿಗಾಗಿ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2445508, ಧಾರವಾಡ ಉಪವಿಭಾಗಾಧಿಕಾರಿಗಳ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2233860, ಧಾರವಾಡ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2233822, ಅಳ್ನಾವರ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2385544, ಹುಬ್ಬಳ್ಳಿ ನಗರ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2358035, ಹುಬ್ಬಳ್ಳಿ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2233844, ಕಲಘಟಗಿ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 08370-284535, ಕುಂದಗೋಳ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 08304-290239, ನವಲಗುಂದ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 08380-229240, ಅಣ್ಣಿಗೇರಿ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 8618442759 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.