ಗಮನಿಸಿ: ನ.30ರವೆಗೆ ಎಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಾತಿ ವಿಸ್ತರಣೆ

ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶಾವಕಾಶದ ಕೊನೆಯ ದಿನಾಂಕವನ್ನು ಸುಪ್ರೀಂ ಕೋರ್ಟ್ ನವೆಂಬರ್ 30ರವರೆಗೆ ವಿಸ್ತರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಮುನ್ನ ಎಐಸಿಟಿಇ ನಿಗದಿ ಮಾಡಿದ್ದ ಪ್ರಕಾರ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಅಕ್ಟೋಬರ್ 25 ಕೊನೆಯ ದಿನವಾಗಿತ್ತು. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ನ ಮೊರೆ ಹೋಗಿತ್ತು. ಈ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ಹೀಗಾಗಿ ನಮಗೆ ಒಂದು ತಿಂಗಳಿಗಿಂತ ಹೆಚ್ಚು ಕಾಲಾವಕಾಶ ಸಿಕ್ಕಿದೆ. ಇಷ್ಟರಲ್ಲಿ ನಾವು ಸುಗಮ ಕೌನ್ಸೆಲಿಂಗ್ ಸೇರಿದಂತೆ ಪ್ರವೇಶ ಪ್ರಕ್ರಿಯೆ ಮುಗಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.