ರಾಜ್ಯದ ಜನತೆಗೆ ಸಿಹಿ ಸುದ್ದಿ: ವಿದ್ಯುತ್ ದರ ಇಳಿಸಿದ ಸರ್ಕಾರ - ಮಾರ್ಚ್ 1ರಿಂದ ಪರಿಷ್ಕೃತ ದರ ಜಾರಿಗೆ

ರಾಜ್ಯದ ಜನತೆಗೆ ಸಿಹಿ ಸುದ್ದಿ: ವಿದ್ಯುತ್ ದರ ಇಳಿಸಿದ ಸರ್ಕಾರ - ಮಾರ್ಚ್ 1ರಿಂದ ಪರಿಷ್ಕೃತ ದರ ಜಾರಿಗೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಗಣನೆ ಇರುವಾಗಲೇ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರವು ಗುಡ್ ನ್ಯೂಸ್ ನೀಡಿದೆ. 

ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗಲಿದೆ.