ಸಿಎಂ ಬೊಮ್ಮಾಯಿ ನಿರ್ಧಾರಕ್ಕೆ ಸರ್ಕಾರಿ ನೌಕರರು ಫುಲ್ ಖುಷ್

ಬೆಂಗಳೂರು:ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಸಿಹಿ ಸುದ್ದಿ ಕೊಟ್ಟಿದ್ದಾರೆ. ಹೌದು. ಈ ಸುದ್ದಿ ಕೇಳಿದ ಸರ್ಕಾರಿ ನೌಕರರು ಫುಲ್ ಖುಷ್ ಆಗಿದ್ದಾರೆ. ಜನವರಿ-1 ರಿಂದಲೇ ಜಾರಿಗೆ ಬರುವಂತೆ ಸರ್ಕಾರಿ ನೌಕರರ ಶೇಕಡ 2.75 ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನಿರ್ಧರಿಸಿದ್ದಾರೆ. ಈ ವಿಷಯವನ್ನ ಸಿಎಂ ಬೊಮ್ಮಾಯಿ ಟ್ವಿಟರ್ ಮೂಲಕವೂ ತಿಳಿಸಿದ್ದಾರೆ. ಇದಕ್ಕಾಗಿಯೇ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಬಗ್ಗೆ ಸರ್ಕಾರಿ ಆದೇಶ ಕೂಡ ಹೊರಡಿಸಲಾಗಿದೆ.