ಕಾಂಗ್ರೆಸ್ ಸಮಿತಿಯ ಶಿಕ್ಷಕರ ವಿಭಾಗದ ಅಧ್ಯಕ್ಷರಾಗಿ ಗುರಿಕಾರ ನೇಮಕ

ಧಾರವಾಡ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ವಿಭಾಗದ ಅಧ್ಯಕ್ಷರಾಗಿ ಸಂಘಟಕ, ಹೋರಾಟಗಾರ ಬಸವರಾಜ ಗುರಿಕಾರ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಮಾರ್ಗದರ್ಶನದಲ್ಲಿ ಮತ್ತು ರಾಜ್ಯದ ನಾಯಕರ ಸಹಕಾರದೊಂದಿಗೆ ಶಿಕ್ಷಕರ ವಿಭಾಗದ ಸಂಘಟನೆ ಬಲಪಡಿಸಲು ಹಾಗೂ ಪಕ್ಷದ ಬಲವರ್ಧನೆಗೆ ಮುಂದಾಗಬೇಕು ಎಂದು ನೇಮಕಾತಿ ಆದೇಶ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.