ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್ಡಿ ರೇವಣ್ಣ

ಬೆಂಗಳೂರು : ಹೆಚ್ಡಿ ರೇವಣ್ಣ ಲೈಗಿಂಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಂಧನ ಭೀತಿಯಿಂದ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಹಿಂಪಡೆದಿದ್ದಾರೆ. ಪ್ರಕರಣದಲ್ಲಿ ತಮ್ಮನ್ನು ಬಂಧಿಸಬಹುದು ಎಂಬ ಭೀತಿಯಲ್ಲಿದ್ದ ರೇವಣ್ಣ ಗುರುವಾರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ವಿಶೇಷ ತನಿಖಾ ದಳದ ಪರ ವಾದ ಮಂಡಿಸಿದ್ದ ಎಸ್ಪಿಸಿ ಬಿ.ಎನ್.ಜಗದೀಶ್ ಅವರು, ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಅವರಿಗೆ ನೋಟಿಸ್ ನೀಡಲಾಗಿದೆ. ಈ ನೋಟಿಸ್ನಲ್ಲಿ ತಮ್ಮ (ರೇವಣ್ಣ) ವಿರುದ್ಧ ದಾಖಲಾಗಿರುವ ಎಲ್ಲ ಆರೋಪಗಳು ಜಾಮೀನು ರಹಿತವಲ್ಲದ್ದಾಗಿದೆ. ಅಲ್ಲದೆ, ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಸೇರ್ಪಡೆಯಾಗಿಲ್ಲ. ಹೀಗಾಗಿ ಅರ್ಜಿದಾರರನ್ನು ಬಂಧಿಸುವ ಅಗತ್ಯ ಎದುರಾಗುವುದಿಲ್ಲ. ಆದ್ದರಿಂದ ನಿರೀಕ್ಷಣಾ ಜಾಮೀನು ಪಡೆದುಕೊಳ್ಳುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ವಿವರಿಸಿದರು.
ಈ ದಿನದವರೆಗೆ ಎಸ್ಐಟಿ ಜಾಮೀನು ರಹಿತ ಪ್ರಕರಣ ದಾಖಲಿಸಿಲ್ಲ. ಅತ್ಯಾಚಾರ ಆರೋಪ ಇಲ್ಲದೇ ಇರುವುದರಿಂದ ನೀರಿಕ್ಷಣಾ ಜಾಮೀನು ಅಗತ್ಯವಿಲ್ಲ ಎಂದಾದ ಬಳಿಕ ರೇವಣ್ಣ ಪರ ವಕೀಲರು, ಅರ್ಜಿ ಹಿಂಪಡೆಯುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ರೇವಣ್ಣ ಅರ್ಜಿ ವಾಪಸ್ ತೆಗೆದುಕೊಂಡಿದ್ದಾರೆ.