ಜಿಲ್ಲೆಯ ಕಾಲೇಜು ವ್ಯಾಪ್ತಿಯಲ್ಲಿ 16 ರಿಂದ 23 ರವರೆಗೆ ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಫೆ. 16 ಬೆಳಿಗ್ಗೆ 6 ಗಂಟೆಯಿಂದ ಫೆ.23 ಸಂಜೆ 6 ಗಂಟೆಯವರೆಗೆ ಕಲಂ 144ರ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪದವಿಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ವ್ಯಾಪ್ತಿಗಳಿಗೆ ಇದು ಅನ್ವಯಿಸಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.