ಎಸ್.ಸಿ ಎಸ್.ಟಿ ಸಮುದಾಯಕ್ಕೆ ಮಂಜೂರಾದ ಜಮೀನು ಪರಭಾರೆ ಮಾಡಲು ಅನುಮತಿ ಕಡ್ಡಾಯ

ಎಸ್.ಸಿ ಎಸ್.ಟಿ ಸಮುದಾಯಕ್ಕೆ ಮಂಜೂರಾದ ಜಮೀನು ಪರಭಾರೆ ಮಾಡಲು ಅನುಮತಿ ಕಡ್ಡಾಯ

ಬೆಂಗಳೂರು: ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಬಾರದು ಎಂಬುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ ಬಲರಾಮ್ ಸುತ್ತೋಲೆ ಹೊರಡಿಸಿದೆ. ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ( ಕೆಲವು ಭೂಮಿಗಳ ಪರಭಾರೆ ನಿಷೇಧ ) ಅಧಿನಿಯಮ 1978ರನ್ವಯ ನಿರ್ಬಂಧವನ್ನು ವಿಧಿಸಲಾಗಿದೆ.