ಬ್ರೇಕಿಂಗ್‌ : ಎಸ್ಎಸ್ಎಲ್ಸಿ ರಿಸಲ್ಟ್ ಪ್ರಕಟ.. ಉಡುಪಿ ಜಿಲ್ಲೆ ಪ್ರಥಮ..

ಬ್ರೇಕಿಂಗ್‌ : ಎಸ್ಎಸ್ಎಲ್ಸಿ ರಿಸಲ್ಟ್ ಪ್ರಕಟ.. ಉಡುಪಿ ಜಿಲ್ಲೆ ಪ್ರಥಮ..

ಬೆಂಗಳೂರು : ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. 

ಇನ್ನೂ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ಇದ್ದರು. 

ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದಾರೆ. 4,41,910 ಬಾಲಕರು ಮತ್ತು 4,28,058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ. ಹೊರಬಿದ್ದ ಫಲಿತಾಂಶದಂತೆ ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. 

ಫಲಿತಾಂಶ ನೋಡಲು ಈ ವೆಬ್‌ಸೈಟ್‌ ಪರಿಶೀಲಿಸಬಹುದು. 

https://karresults.nic.in 

sslc.karnataka.gov.in 

kseab.karnataka.gov.in