ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ

ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ

ಹುಬ್ಬಳ್ಳಿ/ನವದೆಹಲಿ : ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಪ್ರಧಾನಿ ಆಶಯವಾಗಿದ್ದು, ಸೂರ್ಯ ಘರ್ ಯೋಜನೆ ಇದಕ್ಕೆ ಪ್ರತೀಕವಾಗಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. 

ನವದೆಹಲಿಯಲ್ಲಿ ಇಂದು ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ಸಭೆ ಉದ್ದೇಶಿಸಿ ಮಾತನಾಡಿದರು. ಈ ನೂತನ ಸೂರ್ಯ ಘರ್ ಯೋಜನೆಯಡಿ ದೇಶಾದ್ಯಂತ 1 ಕೋಟಿ ಗ್ರಾಹಕರು 300 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು. 

ದೇಶದ ನಾನಾ ರಾಜ್ಯಗಳು, ವಿತರಕ ಘಟಕಗಳು ಮತ್ತು ನಾಗರಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಈ ಮಹತ್ವದ ಸಭೆಯಲ್ಲಿ ಸಚಿವ ಜೋಶಿ ಮಾರ್ಗದರ್ಶನ ನೀಡಿದರು. ಸೂರ್ಯ ಘರ್ ಮೂಲಕ ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಸಾಧಿಸುವುದು ಭಾರತದ ಆಶಯವಾಗಿದ್ದು, ಇದು ಹಸಿರು ಹಾಗೂ ಹೆಚ್ಚು ಸುಸ್ಥಿರ ಭವಿಷ್ಯಕ್ಕೆ ಸುಗಮ ದಾರಿಯಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಿಸಿದರು.