ನಾಳೆ, ನಾಡಿದ್ದು ಸರ್ಕಾರಿ ಧಾರವಾಡ ಜಿಲ್ಲೆಯ ಸರ್ಕಾರಿ ನೌಕರರಿಗೆ ರಜೆ ಇಲ್ಲ

ನಾಳೆ, ನಾಡಿದ್ದು ಸರ್ಕಾರಿ ಧಾರವಾಡ ಜಿಲ್ಲೆಯ ಸರ್ಕಾರಿ ನೌಕರರಿಗೆ ರಜೆ ಇಲ್ಲ

ಧಾರವಾಡ: ಬರುವ ಸೆಪ್ಟೆಂಬರ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರ್ಕಾರಿ ನೌಕರರು ಉಪಸ್ಥಿತರಿದ್ದು, ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಬೇಕು. ಡಿಸಿ ಅನುಮತಿ ಇಲ್ಲದೇ ಯಾರೂ ರಜೆ ಹೋಗುವಂತಿಲ್ಲ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿದರು. 

ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ರೂಪುರೇಷೆ ಮಾಡಲಾಗಿದೆ. ಮಾನವ ಸರಪಳಿ ರಚನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಆಗಿರುವುದರಿಂದ ಜಿಲ್ಲೆಯ ಪ್ರತಿಯೊಬ್ಬ ಸರ್ಕಾರಿ ನೌಕರನು ಕಡ್ಡಾಯವಾಗಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು. 

ಸೆಪ್ಟೆಂಬರ್ 14, 15 ಮತ್ತು 16 ರಂದು ಸಾರ್ವತ್ರಿಕ ರಜೆ ಇದೆ ಎಂದು ಮುಂಚಿತವಾಗಿ, ಈಗಾಗಲೇ ಯಾವುದೇ ಹಂತದ ಅಧಿಕಾರಿ ಹಾಗೂ ಸಿಬ್ಬಂದಿ ರಜೆ ಹೋಗಿದ್ದರೆ, ಆಯಾ ಇಲಾಖೆ ಮೇಲಾಧಿಕಾರಿ ತಕ್ಷಣ ತಮ್ಮ ಅಧಿಕಾರಿ, ಸಿಬ್ಬಂದಿಗಳ ರಜೆ ರದ್ದುಪಡಿಸಿ, ಅವರು ಮರಳಿ ಕಚೇರಿಗೆ ಹಾಜರಾಗಲು ಸೂಚಿಸಬೇಕು. ಯಾರಿಗೇ ಆಗಲಿ, ರಜೆ ಅನಿವಾರ್ಯವಾಗಿ ಅಗತ್ಯವಿದ್ದರೆ ಅವರು ನೇರವಾಗಿ ಸ್ವತಃ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಸಂಪರ್ಕಿಸಿ, ಅನುಮತಿ ಪಡೆಯಬೇಕು. ಒಂದು ವೇಳೆ ಹಿರಿಯ ಅಧಿಕಾರಿ ಅನುಮತಿ ಮೇರೆಗೆ ಯಾರೇ ರಜೆ ಹೋಗಿದ್ದು ಕಂಡುಬಂದಲ್ಲಿ, ರಜೆ ಮಂಜೂರಿ ಮಾಡಿದ್ದ ಆಯಾ ಅಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡಿ, ಸರ್ಕಾರಕ್ಕೆ ಸೂಕ್ತ ಕ್ರಮಕ್ಕಾಗಿ ಶಿಫಾರಸ್ಸು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.